ಇವತ್ತು ಶಿಕ್ಷಣವೆನ್ನುವುದು ಯಾವ ರೀತಿ ವ್ಯಾಪಾರೀಕರಣಕ್ಕೊಳಪಟ್ಟಿದೆ ಎಂಬುದಕ್ಕೆ ಇದೊಂದು ನಿದರ್ಶನ. ಶಿಕ್ಷಣದಂತಹ ಪವಿತ್ರ ಕ್ಷೇತ್ರಗಳೂ ದುಡ್ಡು ಮಾಡುವ ದಂಧೆಗಳಾದಾಗ ಇಂತಹ ವಿಕೃತಿ, ವಿಚಿತ್ರಗಳು ತಲೆ ಎತ್ತುತ್ತವೆ. ಇವು ನಮ್ಮ ಸಮಾಜದ ನೈತಿಕ ಅಧಃಪತನದ ಧ್ಯೋತಕವೆ ಅಥವಾ ಇಂದಿನ ಸ್ಪರ್ಧಾತ್ಮಕ ಜಗತ್ತಿನ ಅನಿವಾರ್ಯತೆಯೆ ? ಇದು ಹೀಗೆ ಮುಂದುವರೆದರೆ ಸ್ಪರ್ಧೆಯ, ಆಕರ್ಷಣೆಯ , ಅಂತಸ್ತಿನ ಜಿದ್ದಿಗೆ ಬಿದ್ದು ಶಿಕ್ಷಣ ಸಂಸ್ಥೆಗಳು, ಕಾಲೇಜುಗಳು ಅರೆಬೆತ್ತಲೆ ಜಾಹೀರಾತುಗಳನ್ನು ಹಾಕಿ ತಮ್ಮ ಇರುವಿಕೆಯನ್ನು ಪ್ರಚುರಪಡಿಸಿ, ವಿದ್ಯಾರ್ಥಿಗಳನ್ನು ಸೆಳೆಯಲು ಮಾಡೆಲ್ ಗಳನ್ನು ನೇಮಿಸಿಕೊಳ್ಳುವ ಹಂತಕ್ಕೆ ಇಳಿದರೂ ಅಚ್ಚರಿಯೇನಿಲ್ಲ.
******************************************************
ಇದರ ಬಗ್ಗೆ ವಿಜಯ ಕರ್ನಾಟಕದಲ್ಲಿ ಸಚಿತ್ರ ವರದಿ ಪ್ರಕಟವಾಗಿ ಸಂಬಂಧಪಟ್ಟ ಸಂಸ್ಥೆಗೆ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಗೆ ಛೀಮಾರಿ ಹಾಕಿದ ಮಾರನೆಯ ದಿನವೇ ಈ ಜಾಹಿರಾತನ್ನು ತೆಗೆದು ಹಾಕಲಾಯಿತು.